
ರಾಯಚೂರು ಅ.27: ರಾಯಚೂರು ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವ ಆಜೀವ ಸದಸ್ಯರು ನವಂಬರ್ 21ರಂದು ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ನಾಡೋಜ ಡಾ.ಮಹೇಶ ಜೋಶಿ ಅವರಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಗೆಲ್ಲಿಸಬೇಕು ಎಂದು ಭಾವೈಕ್ಯ ಶಾಂತಿ ಸಂದೇಶ ಸಂಸ್ಥೆಯ ರಾಯಚೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಪಂಪಯ್ಯಸ್ವಾಮಿ ಸಾಲಿಮಠ ಸಿಂಧನೂರು ಆಜೀವ ಸದಸ್ಯರಲ್ಲಿ ಮನವಿ ಮಾಡಿದ್ದಾರೆ.
